ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವ – ಉಪಲೋಕಾಯುಕ್ತರ ವರದಿ ನಿಜವಾಗಿದೆ: ಆರ್. ಅಶೋಕ್ ಆರೋಪ

1 Min Read
1 Min Read

ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿನ ಅವ್ಯವಹಾರ ಹಾಗೂ ಭ್ರಷ್ಟಾಚಾರ ಕುರಿತು ಉಪಲೋಕಾಯುಕ್ತರು ಹೊರಹಾಕಿದ ತೀವ್ರ ಟೀಕೆಗೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಸರ್ಕಾರದ ಆಡಳಿತ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ ಎಂದು ಆರೋಪಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಲ್ಯಾಪ್ಟಾಪ್, ಎಲ್‌ಇಡಿ ಪ್ರೊಜೆಕ್ಟರ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳ ಖರೀದಿಯಲ್ಲಿ ನಿಯಮ ಉಲ್ಲಂಘನೆ ಸಂಭವಿಸಿದ್ದು, ಲೋಕಾಯುಕ್ತ ದಾಳಿಯಲ್ಲಿ ಲಕ್ಷಾಂತರ ರೂಪಾಯಿಗಳ ಅನಿಯಮತೆ ಬಯಲಾಗಿರುವುದು ಈ ಆರೋಪಕ್ಕೆ ಸಾಕ್ಷಿ ಎನ್ನುವುದಾಗಿ ಅಶೋಕ್ ಹೇಳಿದರು.

ಮುಂದುವರಿದು, “ದಿನಕ್ಕೊಂದು ಹಗರಣ, ದಿನಕ್ಕೊಂದು ಅಕ್ರಮ ನಡೆಯುತ್ತಿರುವುದು ಜನರ ನಂಬಿಕೆಗೆ ದೊಡ್ಡ ಹೊಡೆತವಾಗಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸಂಪುಟದಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ನೀಡಲಾಗಿದೆ” ಎಂದು ಅವರು ಆರೋಪಿಸಿದರು.

ರಾಜ್ಯವನ್ನು ಭ್ರಷ್ಟಾಚಾರದ ಹೊಳೆಯಲ್ಲಿ ಮುಳುಗದಂತೆ ರಕ್ಷಿಸಲು ಸಿಎಂ ಡಾ. ಸಿದ್ದರಾಮಯ್ಯ ಅವರು ಜವಾಬ್ದಾರಿಯುತ ನಿರ್ಧಾರ ಕೈಗೊಳ್ಳಬೇಕು ಎಂದು ಅಶೋಕ್ ಒತ್ತಾಯಿಸಿದರು.

Share This Article
Leave a Comment