ಪಾಸ್ ಇದ್ದವರಿಗೆ ಮಾತ್ರ ಎಂಟ್ರಿ! ಚುನಾವಣಾ ಹಿನ್ನೆಲೆ ವಿಧಾನಸೌಧದಲ್ಲಿ ಕಟ್ಟು ನಿಟ್ಟಿನ ಕ್ರಮ

1 Min Read
1 Min Read

ಬೆಂಗಳೂರು: ವಿಧಾನ ಪರಿಷತ್ (ಎಂಎಲ್‌ಸಿ) ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನ ವಿಧಾನಸೌಧ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದು, ವ್ಯಾಪಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.

ನಗರ ಪೊಲೀಸ್ ಆಯುಕ್ತ ನಿರ್ಮಲ್ ಕುಮಾರ್ ಸಿಂಗ್ ಮಾಹಿತಿ ನೀಡಿ, ಚುನಾವಣಾ ಪ್ರಕ್ರಿಯೆ ಶಾಂತಿಯುತ ಹಾಗೂ ಸುಗಮವಾಗಿ ನಡೆಯುವ ಉದ್ದೇಶದಿಂದ ವಿಧಾನಸೌಧ ಸುತ್ತ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಭದ್ರತಾ ದೃಷ್ಟಿಯಿಂದ ವಿಧಾನಸೌಧದ ಸುತ್ತ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ನಿರ್ಬಂಧಾಜ್ಞೆ ಜಾರಿಗೊಳಿಸಲಾಗಿದ್ದು, ಅನಗತ್ಯ ಓಡಾಟ ಮತ್ತು ಗುಂಪು ಸೇರುವುದಕ್ಕೆ ಕಟ್ಟುನಿಟ್ಟಿನ ನಿಯಂತ್ರಣ ಹೇರಲಾಗಿದೆ. ಜೊತೆಗೆ, ಅಧಿಕೃತ ಪಾಸ್ ಹೊಂದಿರುವವರಿಗೆ ಮಾತ್ರ ವಿಧಾನಸೌಧ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

ಚುನಾವಣಾ ದಿನ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಪ್ರಮುಖ ಸ್ಥಳಗಳಲ್ಲಿ ತಪಾಸಣೆ ಮತ್ತು ನಿಗಾವಹಿಸುವ ಕಾರ್ಯವನ್ನು ತೀವ್ರಗೊಳಿಸಲಾಗಿದೆ. ಪರಿಸ್ಥಿತಿಯ ಮೇಲೆ ಹಿರಿಯ ಅಧಿಕಾರಿಗಳು ನಿರಂತರ ನಿಗಾ ವಹಿಸಿದ್ದಾರೆ.

Share This Article
Leave a Comment