ಚಂಡೀಗಢ: 1975ರಲ್ಲಿ ದೇಶದಲ್ಲಿ ಜಾರಿಗೊಂಡ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ನಾಗರಿಕರ ಹಕ್ಕುಗಳು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ಉಂಟಾದ ಘಟನೆಗಳನ್ನು ಸ್ಮರಿಸುವ ಉದ್ದೇಶದಿಂದ ಭಾರತೀಯ ಜನತಾ ಪಕ್ಷ (ಬಿಜೆಪಿ) ಚಂಡೀಗಢದಲ್ಲಿ ‘ಸಂವಿಧಾನ ಹತ್ಯಾ ದಿವಸ್’ ಆಚರಿಸಿತು.
ಈ ಕಾರ್ಯಕ್ರಮದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ತುರ್ತು ಪರಿಸ್ಥಿತಿ ಸುಮಾರು 21 ತಿಂಗಳು ಜಾರಿಯಲ್ಲಿದ್ದು, ಆ ಅವಧಿಯಲ್ಲಿ ಅನೇಕ ನಾಗರಿಕರು ವಿವಿಧ ರೀತಿಯ ಹಿಂಸೆ, ದೌರ್ಜನ್ಯ ಹಾಗೂ ಹಕ್ಕುಗಳ ನಿರ್ಬಂಧವನ್ನು ಎದುರಿಸಬೇಕಾಯಿತು ಎಂದು ಅವರು ಹೇಳಿದರು.
ಇಂದಿನ ಯುವ ಪೀಳಿಗೆಗೆ ಆ ಕಾಲಘಟ್ಟದ ಇತಿಹಾಸ ಮತ್ತು ಪ್ರಜಾಪ್ರಭುತ್ವದ ಮಹತ್ವವನ್ನು ತಿಳಿಸುವ ಉದ್ದೇಶದಿಂದಲೇ ಪ್ರತಿವರ್ಷ ‘ಸಂವಿಧಾನ ಹತ್ಯಾ ದಿವಸ್’ವನ್ನು ಆಚರಿಸಲಾಗುತ್ತಿದೆ ಎಂದು ಧರ್ಮೇಂದ್ರ ಪ್ರಧಾನ್ ತಿಳಿಸಿದರು.
.


