ಕೇರಳದ ವೈದ್ಯಕೀಯ ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ಎನ್‌ಸಿಡಬ್ಲ್ಯು ಗಂಭೀರ ಸ್ಪಂದನೆ; 7 ದಿನಗಳಲ್ಲಿ ವರದಿ ಕೇಳಿದ ಆಯೋಗ

1 Min Read
1 Min Read

ನವದೆಹಲಿ: ಉಜ್ಬೇಕಿಸ್ತಾನದಲ್ಲಿ ಮೃತಪಟ್ಟ ಕೇರಳ ಮೂಲದ 21 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ಮಹಿಳಾ ಆಯೋಗ (NCW) ಸ್ವಯಂಪ್ರೇರಿತವಾಗಿ (Suo Motu) ದಾಖಲಿಸಿಕೊಂಡಿದೆ. ಪ್ರಕರಣಕ್ಕೂ ಮುನ್ನ ವಿದ್ಯಾರ್ಥಿನಿಗೆ ದೈಹಿಕ ಹಲ್ಲೆ, ಕಿರುಕುಳ ಹಾಗೂ ಬಲವಂತದ ಧರ್ಮಾಂತರ ಯತ್ನ ನಡೆದಿರುವ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಆಯೋಗ ತೀವ್ರ ಕಳವಳ ವ್ಯಕ್ತಪಡಿಸಿದೆ.

ಈ ಸಂಬಂಧ ಕೇರಳ ಪೊಲೀಸ್ ಮಹಾನಿರ್ದೇಶಕರಿಗೆ (DGP) ಪತ್ರ ಬರೆದಿರುವ ರಾಷ್ಟ್ರೀಯ ಮಹಿಳಾ ಆಯೋಗ, ತ್ವರಿತ ಮತ್ತು ಸಮಗ್ರ ತನಿಖೆ ನಡೆಸುವಂತೆ ಸೂಚಿಸಿದೆ.

ಜೊತೆಗೆ, ಭಾರತದ ವಿದೇಶಾಂಗ ಸಚಿವಾಲಯ, ತಾಷ್ಕೆಂಟ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗೂ ಸಂಬಂಧಿತ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ತನಿಖೆ ಮುಂದುವರಿಸಬೇಕು, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಸಾಕ್ಷ್ಯಗಳನ್ನು ಸುರಕ್ಷಿತವಾಗಿ ಸಂರಕ್ಷಿಸಬೇಕು ಹಾಗೂ ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ ಅಗತ್ಯ ನೆರವು ಒದಗಿಸಬೇಕು ಎಂದು ಆಯೋಗ ಮನವಿ ಮಾಡಿದೆ.

ಪ್ರಕರಣದ ತನಿಖೆಯ ಪ್ರಗತಿ ಕುರಿತು ಏಳು ದಿನಗಳೊಳಗೆ ಕೈಗೊಂಡ ಕ್ರಮಗಳ ವರದಿ (Action Taken Report) ಸಲ್ಲಿಸುವಂತೆ ಕೇರಳ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚಿಸಿದೆ.

ಇದೇ ವೇಳೆ, ಉಜ್ಬೇಕಿಸ್ತಾನದಲ್ಲಿರುವ ಭಾರತದ ರಾಯಭಾರಿಗೆ ಕೂಡ ಆಯೋಗ ಪತ್ರ ಬರೆದು, ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕಾನೂನು ಪ್ರಕ್ರಿಯೆ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುವಂತೆ ಹಾಗೂ ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ನೆರವು ಒದಗಿಸುವಂತೆ ಮನವಿ ಮಾಡಿದೆ.

Share This Article