ನವದೆಹಲಿ: ಸಂಸತ್ತಿನ ಮಳೆಗಾಲ ಅಧಿವೇಶನ ಆರಂಭಕ್ಕೂ ಮುನ್ನ ಕಾಂಗ್ರೆಸ್ ತನ್ನ ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಕಾಂಗ್ರೆಸ್ ಸಂಸದೀಯ ಪಕ್ಷದ (Congress Parliamentary Party – CPP) ಸಭೆಯನ್ನು ಇಂದು ನವದೆಹಲಿಯಲ್ಲಿ ನಡೆಸಿತು.
ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಹಾಗೂ ಸಂಸದರು ಭಾಗವಹಿಸಿದ್ದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಸಂಸದ ಪ್ರಮೋದ್ ತಿವಾರಿ, ಮುಂಬರುವ ಮಳೆಗಾಲ ಅಧಿವೇಶನದಲ್ಲಿ ಸಂಸತ್ತಿನಲ್ಲಿ ಪ್ರಸ್ತಾಪಿಸಬೇಕಾದ ಪ್ರಮುಖ ರಾಷ್ಟ್ರೀಯ ಮತ್ತು ಸಾರ್ವಜನಿಕ ಹಿತಾಸಕ್ತಿ ವಿಷಯಗಳ ಕುರಿತು ಪಕ್ಷದ ನಿಲುವು ಹಾಗೂ ಕಾರ್ಯತಂತ್ರವನ್ನು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿಸಿದರು.
ಮಳೆಗಾಲ ಅಧಿವೇಶನದಲ್ಲಿ ಜನಸಾಮಾನ್ಯರ ಸಮಸ್ಯೆಗಳು ಮತ್ತು ವಿವಿಧ ಪ್ರಮುಖ ವಿಷಯಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸುವ ಕುರಿತು ಪಕ್ಷದ ನಾಯಕರು ಸಮಾಲೋಚನೆ ನಡೆಸಿದರು ಎಂದು ಅವರು ಹೇಳಿದರು.


