ಸ್ವಾತಂತ್ರ್ಯೋತ್ಸವ ಹಿನ್ನೆಲೆ: ಸಾರ್ವಜನಿಕರಿಗೆ ಕೆಂಪುಕೋಟೆ ಪ್ರವೇಶ ತಾತ್ಕಾಲಿಕ ಬಂದ್

1 Min Read
1 Min Read

ನವದೆಹಲಿ: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಿದ್ಧತೆಗಳ ಹಿನ್ನೆಲೆಯಲ್ಲಿ ದೆಹಲಿಯ ಐತಿಹಾಸಿಕ ಕೆಂಪುಕೋಟೆ (ರೆಡ್ ಫೋರ್ಟ್) ಅನ್ನು ಸಾರ್ವಜನಿಕರ ಪ್ರವೇಶಕ್ಕೆ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಈ ಕುರಿತು ಭಾರತೀಯ ಪುರಾತತ್ವ ಸಮೀಕ್ಷೆ (ASI) ಅಧಿಕೃತ ಆದೇಶ ಹೊರಡಿಸಿದೆ.

ಐತಿಹಾಸಿಕ ಸ್ಮಾರಕದಲ್ಲಿ ಸ್ವಾತಂತ್ರ್ಯೋತ್ಸವದ ಸಿದ್ಧತಾ ಕಾರ್ಯಗಳು ನಡೆಯುತ್ತಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎಎಸ್‌ಐ ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿ ವರ್ಷ ಸ್ವಾತಂತ್ರ್ಯ ದಿನಾಚರಣೆಯ ಮುನ್ನ ಇದೇ ರೀತಿಯ ನಿರ್ಬಂಧವನ್ನು ವಿಧಿಸುವುದು ಸಾಮಾನ್ಯ ಪ್ರಕ್ರಿಯೆಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ಸರ್ಕಾರದಿಂದ ಅಧಿಕೃತ ಪಾಸ್ ಪಡೆದವರಿಗೆ ಮಾತ್ರ ಕೆಂಪುಕೋಟೆ ಆವರಣ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಕಾರ್ಯಕ್ರಮವು ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಯ ನಡುವೆ ನಡೆಯಲಿದ್ದು, ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.

Share This Article