ನವದೆಹಲಿ: ದೆಹಲಿ ಸರ್ಕಾರದ ‘ವಿದ್ಯಾ ವಾಹಿನಿ ಯೋಜನೆ’ ಅಡಿಯಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಇಂದು ಸರ್ಕಾರಿ ಶಾಲೆಗಳ 3,000 ವಿದ್ಯಾರ್ಥಿನಿಯರಿಗೆ ಸೈಕಲ್ಗಳನ್ನು ವಿತರಿಸಿದರು.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ರೇಖಾ ಗುಪ್ತಾ, ಈ ಯೋಜನೆಯಿಂದ ವಿದ್ಯಾರ್ಥಿನಿಯರಿಗೆ ಶಾಲೆಗೆ ಸುರಕ್ಷಿತ ಮತ್ತು ಸುಲಭ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ, ಈ ಯೋಜನೆಯು ಶಾಲಾ ಹಾಜರಾತಿ ಹೆಚ್ಚಿಸಲು, ಶಿಕ್ಷಣ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚಿನ ಭಾಗವಹಿಸುವಿಕೆಗೆ ಉತ್ತೇಜನ ನೀಡಲು, ಕುಟುಂಬಗಳ ಆರ್ಥಿಕ ಹೊರೆ ಕಡಿಮೆ ಮಾಡಲು ಹಾಗೂ ವಿದ್ಯಾರ್ಥಿನಿಯರಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.
ರಾಷ್ಟ್ರ ರಾಜಧಾನಿಯ ಸರ್ಕಾರಿ ಶಾಲೆಗಳಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 1.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಈ ಯೋಜನೆಯ ಪ್ರಯೋಜನವನ್ನು ಹಂತ ಹಂತವಾಗಿ ವಿಸ್ತರಿಸಲು ದೆಹಲಿ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಕೇಂದ್ರ ರಾಜ್ಯ ಸಚಿವ ಹಾಗೂ ದೆಹಲಿ ಬಿಜೆಪಿ ಅಧ್ಯಕ್ಷ ಹರ್ಷ್ ಮಲ್ಹೋತ್ರಾ, ದೆಹಲಿ ಶಿಕ್ಷಣ ಸಚಿವ ಆಶೀಷ್ ಸೂದ್, ಶಾಸಕ ರವೀಂದರ್ ನೇಗಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


