ಜಾರ್ಖಂಡ್ನಲ್ಲಿ ಅತಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಇಂದು ‘ರೆಡ್ ಅಲರ್ಟ್’ ಘೋಷಿಸಿದೆ. ರಾಜ್ಯದ ಹಲವು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಇದೇ ವೇಳೆ ಬಿಹಾರ, ಛತ್ತೀಸ್ಗಢ, ಪೂರ್ವ ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಒಡಿಶಾ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿಯೂ ಇಂದು ಭಾರಿ to ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಲವು ರಾಜ್ಯಗಳಲ್ಲಿ ಮಳೆಯ ಮುನ್ಸೂಚನೆ
ಜಮ್ಮು ಮತ್ತು ಕಾಶ್ಮೀರ, ಲಡಾಖ್, ಉತ್ತರಾಖಂಡ, ಪಂಜಾಬ್, ಚಂಡೀಗಢ, ಹರಿಯಾಣ, ದೆಹಲಿ, ಪೂರ್ವ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಗುರುವಾರದವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಇದರ ಜೊತೆಗೆ ಕರೈಕಲ್, ಪುದುಚೇರಿ, ತಮಿಳುನಾಡು, ಕೇರಳ ಮತ್ತು ಮಾಹೆಯಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು IMD ತಿಳಿಸಿದೆ.
ಹಲವು ರಾಜ್ಯಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ
ಗುಜರಾತ್, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮುಂದಿನ ಎರಡುರಿಂದ ಮೂರು ದಿನಗಳ ಅವಧಿಯಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೀನುಗಾರರಿಗೆ ಎಚ್ಚರಿಕೆ
ಪ್ರತಿಕೂಲ ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂದು ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಗೆ ಮೀನುಗಾರರು ತೆರಳದಂತೆ IMD ಸಲಹೆ ನೀಡಿದೆ. ಭಾರಿ ಮಳೆ, ಬಲವಾದ ಗಾಳಿ ಮತ್ತು ಸಮುದ್ರದಲ್ಲಿ ಅಲೆಗಳ ತೀವ್ರತೆ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.


