ಬ್ರಿಕ್ಸ್ ಔತಣಕೂಟಕ್ಕೆ ಕಾಂಗ್ರೆಸ್ ಆಡಳಿತದ ಮೂರು ರಾಜ್ಯಗಳ ಸಿಎಂಗಳ ಗೈರು: ಬಿಜೆಪಿ ಟೀಕೆ

1 Min Read
1 Min Read

ನವದೆಹಲಿ: ದೆಹಲಿಯಲ್ಲಿ ಕಳೆದ ವಾರ ನಡೆದ ಬ್ರಿಕ್ಸ್ ಔತಣಕೂಟಕ್ಕೆ ಕಾಂಗ್ರೆಸ್ ಆಡಳಿತದಲ್ಲಿರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಗೈರಾಗಿದ್ದನ್ನು ಬಿಜೆಪಿ ಟೀಕಿಸಿದೆ.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ನಾಯಕಿ ಹಾಗೂ ಸಂಸದೆ ಬಾನ್ಸುರಿ ಸ್ವರಾಜ್, ರಾಜಕೀಯ ಮತ್ತು ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಇರಬಹುದು. ಆದರೆ ಭಾರತ ಮತ್ತು ರಾಷ್ಟ್ರೀಯ ಹಿತಾಸಕ್ತಿಯ ವಿಚಾರದಲ್ಲಿ ಯಾವುದೇ ರೀತಿಯ ಭಿನ್ನಮತಕ್ಕೆ ಅವಕಾಶ ಇರಬಾರದು ಎಂದು ಹೇಳಿದ್ದಾರೆ.

‘ಬ್ರಿಕ್ಸ್ ಯಾವುದೇ ಪಕ್ಷದ ವೇದಿಕೆಯಲ್ಲ’

ಬ್ರಿಕ್ಸ್ ವೇದಿಕೆ ಯಾವುದೇ ಒಂದು ರಾಜಕೀಯ ಪಕ್ಷಕ್ಕೆ ಸೇರಿದದ್ದಲ್ಲ. ಅದು ಭಾರತದ ವೇದಿಕೆಯಾಗಿದೆ ಎಂದು ಬಾನ್ಸುರಿ ಸ್ವರಾಜ್ ಹೇಳಿದ್ದಾರೆ.

ದೇಶದ ಹಿತಾಸಕ್ತಿಗೆ ಸಂಬಂಧಿಸಿದ ಪ್ರಮುಖ ಅಂತಾರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ರಾಷ್ಟ್ರೀಯ ಹಿತಾಸಕ್ತಿಗೆ ಆದ್ಯತೆ ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಆಡಳಿತದ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಔತಣಕೂಟಕ್ಕೆ ಗೈರಾಗಿರುವುದನ್ನು ಉಲ್ಲೇಖಿಸಿದ ಬಿಜೆಪಿ, ಇಂತಹ ಸಂದರ್ಭಗಳಲ್ಲಿ ರಾಜ್ಯಗಳ ಮುಖ್ಯಸ್ಥರು ದೇಶದ ಒಗ್ಗಟ್ಟು ಮತ್ತು ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಭಾಗವಹಿಸಬೇಕಿತ್ತು ಎಂದು ಹೇಳಿದೆ.

Share This Article