ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಭೌತಿಕ ಕಾಯಕ್ಕೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್

1 Min Read
1 Min Read

ಬೆಂಗಳೂರು: ಪರಿಸರ ಸಂರಕ್ಷಣೆಯ ಜೀವಂತ ಪ್ರೇರಣೆ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಅಗಲಿಕೆಯಿಂದ ನಾಡಿನೆಲ್ಲೆಡೆ ದುಃಖದ ವಾತಾವರಣ ಮೂಡಿದೆ. ಇಂದು ಬೆಂಗಳೂರು ನಗರದಲ್ಲಿರುವ ಅವರ ಭೌತಿಕ ದೇಹದ ಬಳಿ ಭೇಟಿ ನೀಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಿಮ್ಮಕ್ಕ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

ತಮ್ಮ ಪ್ರತಿಕ್ರಿಯೆಯಲ್ಲಿ ಆರ್. ಅಶೋಕ್ ಅವರು, “ಸಸಿಗಳನ್ನು ಮಕ್ಕಳಂತೆ ಕಾಣಿಸಿಕೊಂಡು ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದ್ದ ತಿಮ್ಮಕ್ಕ ಅವರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ. ಅವರ ಸೇವಾ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮ ಕರ್ತವ್ಯ” ಎಂದು ಹೇಳಿದರು.

ರಾಜಕೀಯ, ಸಾಮಾಜಿಕ ವಲಯದ ಗಣ್ಯರು ಕೂಡ ತಿಮ್ಮಕ್ಕ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.

Share This Article
Leave a Comment